Skip to content

Namma Sandalwood

  • Home
  • Viral News
  • Useful Information
  • cinema news
  • Entertainment
  • News
  • Devotional
  • Serial News
  • Job News
  • Toggle search form

Annabhagya scheme: “ಅನ್ನ ಭಾಗ್ಯ” ಯೋಜನೆ ಹಣ ಇನ್ನೂ ನಿಮ್ಮ ಬ್ಯಾಂಕ್‌ ಖಾತೆಗೆ ಬಂದಿಲ್ವಾ.? ಹಾಗಿದ್ರೆ ತಪ್ಪದೆ ಈ ಕೆಲಸ ಮೊದಲು ಮಾಡಿ.! ಹಣ ಖಂಡಿತ ಬರುತ್ತೆ.!

Posted on July 22, 2023 By Admin No Comments on Annabhagya scheme: “ಅನ್ನ ಭಾಗ್ಯ” ಯೋಜನೆ ಹಣ ಇನ್ನೂ ನಿಮ್ಮ ಬ್ಯಾಂಕ್‌ ಖಾತೆಗೆ ಬಂದಿಲ್ವಾ.? ಹಾಗಿದ್ರೆ ತಪ್ಪದೆ ಈ ಕೆಲಸ ಮೊದಲು ಮಾಡಿ.! ಹಣ ಖಂಡಿತ ಬರುತ್ತೆ.!

 

ಅನ್ನಭಾಗ್ಯ ಯೋಜನೆ(Annabhagya scheme)ಯ ಅಡಿಯಲ್ಲಿ ನಿಮಗೆ ಬರುವ ಹಣ ನಿಮ್ಮ ಖಾತೆಗೆ ಜಮಾ ಆಗಿದೆಯೇ ಎಂಬ ಸ್ಟೇಟಸ್ ಅನ್ನು ಚೆಕ್ ಮಾಡುವಾಗ PAV response not at received ಎಂದು ಪೇಮೆಂಟ್ ಡೀಟೇಲ್ಸ್ ನಲ್ಲಿ ಬಂದರೆ, ಹಣ ಜಮಾ ಆಗುತ್ತದೆಯೇ? ಇಲ್ಲವೇ?, ಇಂತಹ ಸಂದರ್ಭದಲ್ಲಿ ಏನು ಮಾಡಬೇಕು ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಿಕೊಡಲಾಗುತ್ತದೆ. ಕೊನೆವರೆಗೂ ಮಿಸ್‌ ಮಾಡ್ದೆ ಓದಿ…

ಅನ್ನ ಭಾಗ್ಯ ಯೋಜನೆಯ ಸ್ಟೇಟಸ್ (Status of DBT)

ಅನ್ನಭಾಗ್ಯ ಯೋಜನೆಯ ಅಕ್ಕಿ ಬದಲಾಗಿ ಹಣ ಹಾಕಲಾಗುತ್ತಿದ್ದು, ನಿಮ್ಮ ಖಾತೆಗೆ ಹಣ ಬಂದಿದೆಯೇ? ಎಷ್ಟು ಹಣ ಜಮೆಯಾಗಿದೆ? ಯಾರ ಖಾತೆಗೆ ಜಮೆಯಾಗಿದೆ? ಎಂಬ ಇತ್ಯಾದಿ ಮಾಹಿತಿ ತಿಳಿಸಿಕೊಡುವ ನಿಟ್ಟಿನಲ್ಲಿ ಆಹಾರ ಇಲಾಖೆಯು ವೆಬ್‌ಸೈಟ್‌ ಲಿಂಕ್‌ ಬಿಡುಗಡೆ ಮಾಡಿರುವುದು ನಿಮಗೆಲ್ಲ ತಿಳಿದೇ ಇದೆ. ಹಾಗೆಯೇ ತುಂಬಾ ಜನರು ಈಗಾಗಲೇ ಅವರ ಸ್ಟೇಟಸ್ ಗಳನ್ನು ಚೆಕ್ ಮಾಡಿಕೊಂಡಿದ್ದೀರಿ.

ಹೀಗೆ, ಅನ್ನ ಭಾಗ್ಯ ಯೋಜನೆಯ ಹಣದ ಸ್ಟೇಟಸ್ ಚೆಕ್ ಮಾಡುವಾಗ ಕೆಲವೊಬ್ಬರಿಗೆ, ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆಯ ಸಂಖ್ಯೆ ಸರಿಯಾಗಿ ಲಿಂಕ್ ಮಾಡಲಾಗಿಲ್ಲ ಎಂಬುವಂತಹ ಹಲವಾರು ಸಮಸ್ಯೆಗಳನ್ನು ನೀವು ಕಾಣುತ್ತೀರ. ಅದರಂತೆಯೇ ನೀವು ಅವುಗಳಿಗೆ ಪರಿಹಾರವನ್ನು ಕೂಡ ಕಂಡುಕೊಂಡಿರುತ್ತೀರ. ಇನ್ನು ಕೆಲವರಿಗೆ ಸ್ಟೇಟಸ್ ಅನ್ನು ಚೆಕ್ ಮಾಡುವಾಗ ಯಾವುದೇ ರೀತಿಯ ಸಮಸ್ಯೆ ಇಲ್ಲದಿದ್ದರೂ ಕೂಡ ಪೇಮೆಂಟ್ ಡೀಟೇಲ್ಸ್ ನಲ್ಲಿ, PAV response not at received ಎಂದು ಕಾಣುತ್ತದೆ. ಈ ರೀತಿಯ ಮೆಸೇಜ್ ನಿಮಗೆ ಕಾಣುತ್ತಿದ್ದರೆ, ಇದಕ್ಕೆ ಯಾವುದೇ ರೀತಿಯ ಭಯವನ್ನು ನೀವು ಪಡುವ ಅವಶ್ಯಕತೆ ಇಲ್ಲ.

ಅನ್ನ ಭಾಗ್ಯ ಯೋಜನೆ ಯ ಸ್ಟೇಟಸ್ ಚೆಕ್ ಮಾಡುವಾಗ PAV ಎಂದು ಬಂದರೆ, ಇನ್ನೂ ಹಣ ನಿಮ್ಮ ಖಾತೆಗೆ ಜಮಾ ಆಗಿಲ್ಲ ಎಂದರ್ಥ. ಆದರೆ, ಹಣವು ಖಂಡಿತವಾಗಿಯೂ ಜಮವಾಗುತ್ತದೆ. PAV ಎಂದರೆ Pay Adjustment voture. ಈ ಸಮಸ್ಯೆ ನಿಮ್ಮ ಸ್ಟೇಟಸ್ ಚೆಕ್ ಮಾಡುವಾಗ ಕಾಣಿಸಿಕೊಂಡರೆ, ಬ್ಯಾಂಕಿನ ಸಿಬ್ಬಂದಿಗಳು ಇನ್ನು ಹಣ ಜಮಾ ಆಗಿರುವ ಮಾಹಿತಿಯನ್ನು ಕೊಟ್ಟಿಲ್ಲ ಎಂದು ಹೇಳಲಾಗುತ್ತದೆ.

ನಿಮ್ಮ ಖಾತೆಗೆ ಯಾವ ಬ್ಯಾಂಕ್ನಿಂದ ಹಣ ಜಮಾ ಆಗುತ್ತದೆಯೋ ಆ ಬ್ಯಾಂಕಿನ ಸಿಬ್ಬಂದಿಗಳು ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ ಎಂದರ್ಥ. ಹಣ ಜಮಾ ಆದ ನಂತರ, PAV (response not at received) ಎಂಬ ಜಾಗದಲ್ಲಿ, ಬ್ಯಾಂಕಿನ ಮಾಹಿತಿಗಳನ್ನು ಅಪ್ಡೇಟ್ ಮಾಡಲಾಗುತ್ತದೆ. ಅವುಗಳೆಂದರೆ : ಯಾರ ಖಾತೆಗೆ ಹಣ ಜಮವಾಗಿದೆಯೋ ಅವರ ಹೆಸರು, ಬ್ಯಾಂಕಿನ ಖಾತೆಯ ಸಂಖ್ಯೆ, ಬ್ಯಾಂಕಿನ ಹೆಸರು, ಎಷ್ಟು ಹಣ ಜಮಾ ಆಗಿದೆ ಎಂಬ ಮಾಹಿತಿಗಳು ಅಲ್ಲಿ ದೊರೆಯುತ್ತವೆ. ಆದರೆ, ನೀವು ಈ ಸಮಸ್ಯೆಯ ಮಾಹಿತಿ ಬಂದರೆ ಕೆಲವು ದಿನಗಳು ಕಾಯಬೇಕು ನಂತರ ನಿಮ್ಮ ಖಾತೆಗೆ ಹಣವು ಖಂಡಿತವಾಗಿಯೂ ಜಮವಾಗುತ್ತದೆ. ಯಾವುದೇ ರೀತಿಯ ಹೆದರಿಕೆ ಬೇಡ.

ಅನ್ನಭಾಗ್ಯದ ಹಣ ಜಮಾ ಆಗಿದೆಯೇ ಎಂಬುದನ್ನು ಚೆಕ್‌ ಮಾಡುವ ವಿಧಾನ

ಹಂತ 1: ಮೊದಲನೆಯದಾಗಿ ಆಹಾರ ಮತ್ತು ನಾಗರಿಕ ಸರಜರಾಜು ಇಲಾಖೆಯ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ https://ahara.kar.nic.in/Home/Eservices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ. ನಂತರ ಮುಖ ಪುಟ ತೆಗೆಯುತ್ತದೆ ಅದರಲ್ಲಿ ಈ ಸ್ಟೇಟಸ್ ಎಂಬ ಆಯ್ಕೆಯನ್ನು ಒತ್ತಿ, ನಂತರ ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.
ಹಂತ 2: ನಂತರ ನಿಮ್ಮ ಜಿಲ್ಲೆಯ ಮೇಲಿನ ಲಿಂಕನ್ನು ಕ್ಲಿಕ್ ಮಾಡಿ.
ಹಂತ 3 : ನಂತರ ಕೆಳಗಿನ ಭಾಗದಲ್ಲಿರುವ ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.

ಹಂತ 4: ಮುಂದುವರೆದು ನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ. ನಂತರ ಗೋ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ, ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವವರ ಸದಸ್ಯರ ಸಂಖ್ಯೆ, ಮುಖ್ಯಸ್ಥರ ಹೆಸರು, ಸದಸ್ಯರ ಯುಐಡಿ, ಎಷ್ಟು ಹಣ ಜಮಾ ಆಗುತ್ತದೆ ಅಥವಾ ಆಗಿದೆ ಎಂಬುದರ ಮಾಹಿತಿಯನ್ನು ನೀವು ನೋಡಬಹುದು.
ಹೀಗೆ ನೀವು ಅನ್ನಭಾಗ್ಯ ಯೋಜನೆಯಡಿಯಲ್ಲಿನ ಹಣವು ನಿಮಗೆ ಜಮಾ ಆಗಿದೆಯೇ ಅಥವಾ ಅದರ ಸ್ಥಿತಿ ಹೇಗಿದೆ ಎಂಬುವುದನ್ನು ಚೆಕ್ ಮಾಡಬಹುದು.

ಹಣ ಬಂದ ತಕ್ಷಣ ಮೆಸೇಜ್ ಕೂಡ ಬರಲಿದೆ

ಅನ್ನಭಾಗ್ಯ ಯೋಜನೆಯ ಹಣ ನಿಮ್ಮ ಖಾತೆಗೆ ವರ್ಗಾವಣೆ ಆಗಿದ ತಕ್ಷಣ, ನಿಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಇದ್ದ ಮೊಬೈಲ್ ನಂಬರಿಗೆ ಹಣ ಜಮಾ ಆಗಿರುವುದರ ಬಗ್ಗೆ ಮೆಸೇಜ್ ಕೂಡ ಬರುತ್ತದೆ. ರಾಜ್ಯದಲ್ಲಿ ಮೊದಲ ಹಂತದಲ್ಲಿಯೇ ಮೈಸೂರು ಜಿಲ್ಲೆಯ ಜನರಿಗೆ ಅನ್ನಭಾಗ್ಯ ಯೋಜನೆಯ ಹಣ ದೊರೆತಿದೆ. ಜಿಲ್ಲೆಯಲ್ಲಿ 50432 ಅಂತ್ಯೋದಯ ಅನ್ನ ಯೋಜನೆ ಕಾರ್ಡ್‌ದಾರ ಕುಟುಂಬದ ಒಟ್ಟು 2,17,199 ಫಲಾನುಭವಿಗಳು, 6,61,290 ಬಿಪಿಎಲ್‌ ಕಾರ್ಡ್‌ಗಳ 20,83,627 ಜನರಿಗೆ ಅನ್ನಭಾಗ್ಯ ಯೋಜನೆಯಡಿ ಹತ್ತು ಕೆಜಿ ಅಕ್ಕಿ ವಿತರಿಸ ಬೇಕಿದೆ.

ಅದರಂತೆ ಎಂದಿನಂತೆ ತಲಾ ಐದು ಕೆಜಿ ಅಕ್ಕಿ ವಿತರಿಸಲಾಗಿದೆ. ಇನ್ನುಳಿದ ಐದು ಕೆಜಿ ಅಕ್ಕಿಗೆ ಬದಲಾಗಿ 170 ರೂ.ಗಳನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗಿದೆ. ಹಾಗಾಗಿ ಎಲ್ಲಾ ಹಂತಗಳಲ್ಲಿಯೂ ಪ್ರತಿ ಜಿಲ್ಲೆಗೆ ಅನ್ನ ಭಾಗ್ಯದ ಹಣವನ್ನು ಜಮಾ ಮಾಡಲಾಗುತ್ತದೆ.

Useful Information Tags:Anna Bhagya Scheme

Post navigation

Previous Post: ʻಗೃಹ ಲಕ್ಷ್ಮೀʼ ಯೋಜನೆಗೆ ಅರ್ಜಿ ಸಲ್ಲಿಸಬೇಕಾ.? SMS ಮಾಡೋದು ಬೇಡ, ಸೇವಾ ಕ್ರೇಂದ್ರಗಳಿಗೆ ಹೋಗೋದು ಬೇಡ ಮನೆಯಲ್ಲೇ ಕುಳಿತು ಮೊಬೈಲ್‌ನಲ್ಲೇ ಸುಲಭವಾಗಿ ಅರ್ಜಿ ಸಲ್ಲಿಸಬಹುದು.!
Next Post: ಜನನ ಪ್ರಮಾಣ ಪತ್ರದಲ್ಲಿ ಏನಾದ್ರೂ ತಪ್ಪಾಗಿದ್ರೆ ತಿದ್ದುಪಡಿ ಮಾಡುವುದು ಹೇಗೆ.? ಇಲ್ಲಿದೆ ಸುಲಭ ಮಾರ್ಗ

Leave a Reply Cancel reply

Your email address will not be published. Required fields are marked *

  • Home
  • About Us!
  • Contact Us !
  • Privacy Policy
  • Disclaimer
  • Terms and Conditions

Recent Posts

  • Ramya: ನಾವು ಎಲ್ಲಾ ಮುಸಲ್ಮಾನರನ್ನು ಕೆಟ್ಟವರು ಅಂತ ಹೇಳೋಕೆ ಆಗಲ್ಲ.! ನಟಿ ರಮ್ಯಾ !
  • Hema: ಫಿಕ್ಸ್ ಆಗಿದ್ದ ಮದುವೆ ಕ್ಯಾನ್ಸಲ್ ಆಯ್ತು.! ದುಡ್ಡು ತಗೊಂಡ ಫ್ರೆಂಡ್ ಕ್ಯಾರೆಕ್ಟರ್ ಬಗ್ಗೆ ಮಾತಡ್ದ.! ಆ್ಯಂಕರ್ ಹೇಮ ಜೀವನದಲ್ಲಿ ಬಂದ ಕಷ್ಟಗಳೆಷ್ಟು ಗೊತ್ತಾ.?
  • Dr Rajkumar: ಅಣ್ಣಾವ್ರು, ಅಂಬಿ, ಶಂಕ್ರಣ್ಣ, ವಿಷ್ಣುದಾದಾ ಒಟ್ಟಿಗೆ ನಟಿಸಬೇಕಿದ್ದ ಸಿನಿಮಾ ಯಾವುದು ಕಥೆ ಏನಾಯ್ತು ಗೊತ್ತಾ.?
  • Anupama Gowda: ಇನ್ನೂ ಮದುವೆಯಾಗದೇ ಇರುವುದಕ್ಕೆ ಕಾರಣ ಈ ಬಿಚ್ಚಿಟ ಅನುಪಮ ಗೌಡ.!
  • Prema: ಕೊನೆಗೂ ಡಿ’ವೋ’ರ್ಸ್ ಬಗ್ಗೆ ಮಾತನಾಡಿದ ನಟಿ ಪ್ರೇಮ.! ಅಷ್ಟಕ್ಕೂ ನಟಿ ಬಾಳಲ್ಲಿ ನಡೆದದ್ದೇನು ನೋಡಿ.!

Copyright © 2025 Namma Sandalwood.

Powered by PressBook WordPress theme