Skip to content

Namma Sandalwood

  • Home
  • Viral News
  • Useful Information
  • cinema news
  • Entertainment
  • News
  • Devotional
  • Serial News
  • Job News
  • Toggle search form

ಒಕ್ಕಲಿಗರು ಸಂಸ್ಕೃತಿ ಹೀನ ಪಶುಗಳು – ಕೆ.ಎಸ್ ಭಗವಾನ್…

Posted on October 16, 2023 By Admin No Comments on ಒಕ್ಕಲಿಗರು ಸಂಸ್ಕೃತಿ ಹೀನ ಪಶುಗಳು – ಕೆ.ಎಸ್ ಭಗವಾನ್…

 

ತಮ್ಮ ಎಡಪಂಥೀಯ ಕಟ್ಟುನಿಟ್ಟಿನ ಧೋರಣೆಯಿಂದ ಸದಾ ಕಾಲ ಹಿಂದೂ ಧರ್ಮ ಹಾಗೂ ಹಿಂದೂ ಧರ್ಮ ಆಚರಣೆಗಳು ಮತ್ತು ಹಿಂದೂ ದೇವಾನು ದೇವತೆಗಳ ಬಗ್ಗೆ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಹಿಂದೂ ಪರ ಸಂಘಟನೆಗಳು ಹಾಗೂ ಬಲಪಂಥೀಯ ಸಂಘಟನೆಗಳಿಂದ ತೀವ್ರ ಮುಖಭಂಗಕ್ಕೊಳಗಾಗುವ ವಿಮರ್ಶಕ ವಿಚಾರವಾದಿ ಪ್ರೊ.ಕೆ.ಎಸ್ ಭಗವಾನ್ ರವರು ಅಕ್ಟೋಬರ್ 13ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ಸಮಿತಿಯಿಂದ ಪುರಭವನದಲ್ಲಿ ಆಯೋಜಿಸಿದ್ದ ದಮ್ಮದೀಕ್ಷಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಮಯದಲ್ಲಿ ಸಭೆ ಉದ್ದೇಶ ಮಾತನಾಡುವಾಗ ತಮ್ಮ ಭಾಷಣದಲ್ಲಿ ಮತ್ತೊಮ್ಮೆ ಹಳೆ ಚಾಳಿಯನ್ನು ಮುಂದುವರಿಸಿದ್ದಾರೆ. ಶಂಕರಾಚಾರ್ಯರ ಆದಿಯಿಂದಾಗಿ ಶ್ರೀರಾಮನವರೆಗೂ ಕೂಡ ಹಿಂದೂ ದೇವತೆಗಳ ಬಗ್ಗೆ ಅವಹೇಳನ ಮಾಡಿಕೊಂಡು ಬಂದಿರುವ ಇವರು ಈ ಬಾರಿ ಒಕ್ಕಲಿಗರ ವಿರುದ್ಧ ಹೇಳಿಕೆಗಳನ್ನು ನೀಡುವ ಮೂಲಕ ಹೊಸದೊಂದು ವಿವಾದ ಮೈ ಮೇಲೆ ಎಳೆದು ಕೊಂಡಿದ್ದಾರೆ.

ಈ ಬಾರಿ ತಮ್ಮ ಹೇಳಿಕೆಗೆ ಕುವೆಂಪು ಅವರ ಹೆಸರನ್ನು ತಳಕು ಹಾಕಿರುವ ಅವರು ಹೀಗೆಂದಿದ್ದಾರೆ. ನಾನು ಹಿಂದೂ ಧರ್ಮವನ್ನು ಯಾವಾಗಲೋ ಬಿಟ್ಟು ಬಿಟ್ಟೆ ಎಂದು ಕುವೆಂಪು ಯಾವಾಗಲೂ ಹೇಳುತ್ತಿದ್ದರು. ಆದರೆ, ಅದು ಅವರ ಶಿಷ್ಯರಿಗೆ ಅದು ಅರ್ಥವಾಗಲಿಲ್ಲ. ಒಕ್ಕಲಿಗರು ಸಂಸ್ಕೃತಿ ಹೀನ ಪಶುಗಳು ಎಂದು ಹೇಳಿದ್ದರು.

ಇದು ನನ್ನ ಮಾತಲ್ಲ ಕುವೆಂಪು ಅವರದ್ದು. ಇಲ್ಲದಿದ್ದರೆ ನನಗೆ ಹೊಡೆಯಲು ಬರುತ್ತಾರೆ, ನನ್ನನ್ನು ಕೊಂದು ಹಾಕಿ ಬಿಡುತ್ತಾರೆ. ಆದರೆ, ನಿಜ ಹೇಳಿಯೇ ಸಾಯಬೇಕು ಹಾಗಾಗಿ ಹೇಳುತ್ತಿದ್ದೇನೆ ಎಂದರು. ಜನಿವಾರದಿಂದ ಜಾತಿ ಗುರುತಿಸುತ್ತಾರೆ. ಹಾಕದವನು ಒಂದು, ಹಾಕಿರೋನು ಒಂದು. ಕೈಗೆ ಕಾಲಿಗೆ ಜಾತಿ ಇಟ್ಟಿರೋದು ಹಿಂದೂ ಧರ್ಮ ಹಿಂದೂ ಧರ್ಮ ನಮ್ಮ ಧರ್ಮ ಅಲ್ಲ. ನಮ್ಮ ಧರ್ಮ ಬೌದ್ಧ ಧರ್ಮ, ಹಿಂದೂ ಧರ್ಮ ಎರಡು ಸಾವಿರ ವರ್ಷಗಳ ಹಿಂದೆ ಹೊರಗಿನಿಂದ ಇಲ್ಲಿಗೆ ಬಂದಿದ್ದು ಬುದ್ಧ ನಮ್ಮಲ್ಲಿ ಜನಿಸಿದವರು ಹಾಗಾಗಿ ಬೌದ್ಧ ಧರ್ಮ ನಮ್ಮದು.

ಜ್ಞಾನದ ಬೆಳಕು ಎನ್ನುವ ಕಾರಣಕ್ಕಾಗಿ ಬುದ್ಧನನ್ನು ಅನೇಕರು ದ್ವೇಷಿಸುತ್ತಾರೆ ಎಂದರು. ಬ್ರಾಹ್ಮಣರು ವೈದಿಕರು ಸಾವಿರಾರು ವರ್ಷದಿಂದ ಬೇರೆಯವರಿಗೆ ಸಂಸ್ಕೃತ ಕಲಿಸಲಿಲ್ಲ. ಎಲ್ಲಾ ಶೂದ್ರರು ಬ್ರಾಹ್ಮಣರ ಗುಲಾಮರು. ಶೂದ್ರನನ್ನು ದೇವರು ಸೃಷ್ಠಿ ಮಾಡಿರೋದೆ ಬ್ರಾಹ್ಮಣರ ಸೇವೆ ಮಾಡಲು ಎಂದು ತಿಳಿದುಕೊಂಡಿದ್ದಾರೆ.

ಶೂದ್ರರನ್ನು ಜೀತದಾಳುಗಳು ಎಂದು ಹೇಳಿರುವ ಈ ಧರ್ಮ ಬೇಕಾ? ಎಂದು ಪ್ರಶ್ನಿಸಿದರು. ಇದರ ಜೊತೆಗೆ ರಾಮರಾಜ್ಯ ಎಂದರೆ ಶ್ಯೂದರನ್ನು ಕೊಲ್ಲುವ ಆಡಳಿತ, ಹೀಗಾಗಿ ಎಚ್ಚರಿಕೆಯಿಂದ ಇರಬೇಕು ಎಂದಿದ್ದಾರೆ. ಭಗವಾನ್ ರವರು ನೀಡಿರುವ ಒಕ್ಕಲಿಗರು ಸಂಸ್ಕೃತಿ ಹೀನ ಪಶುಗಳು ಎನ್ನುವ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.

ಅವರ ಈ ಹೇಳಿಕೆಯ ವಿಡಿಯೋಗಳು ಟಿ.ವಿ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಒಕ್ಕಲಿಗರು ಇವರ ಮಾತಿನ ವಿರುದ್ಧ ಸಿಡಿದೆದ್ದಿದ್ದಾರೆ. ಅ. 14ರಂದು ಮೈಸೂರಿನಲ್ಲಿ ಜಿಲ್ಲಾ ಒಕ್ಕಲಿಗರ ಸಂಘ ಕೂಡ ಪ್ರತಿಭಟನೆ ನಡೆಸಿ ಭಗವಾನ್ ಹೇಳಿಕೆಯನ್ನು ಖಂಡಿಸಿವೆ.

ಮುಂದೆ ಪ್ರತಿಭಟನೆ ದೊಡ್ಡ ಹಂತಕ್ಕೆ ಹೋಗುವ ಸಾಧ್ಯತೆಗಳೂ ದಟ್ಟವಾಗಿದೆ ಎಂದು ಊಹಿಸಿ ಈ ಹಿನ್ನೆಲೆಯಲ್ಲಿ, ಮೈಸೂರಿನಲ್ಲಿರುವ ಭಗವಾನ್ ಅವರ ನಿವಾಸಕ್ಕೆ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ. ಪೊಲೀಸರನ್ನು ಸಹ ಮನೆ ಕಾವಲಿಗೇ ನೇಮಿಸಲಾಗಿದ್ದು, ಮನೆಯ ಮುಂದೆ ಬ್ಯಾರಿಕೇಡ್ ಗಳನ್ನು ಅಳವಡಿಸಲಾಗಿದೆ.

Viral News

Post navigation

Previous Post: 5 Kgಯಲ್ಲಿ 2 Kg ಅಕ್ಕಿಗೆ ಕತ್ತರಿ – ಅನ್ನಭಾಗ್ಯ ಫಲಾನುಭವಿಗಳಿಗೆ ಸಡನ್‌ ಶಾ’ಕ್​..!
Next Post: ಇಸ್ರೇಲ್ ಬಗ್ಗೆ ಇಷ್ಟೊಂದು ಕಾಳಜಿ ತೋರುವ ಮೋದಿಯವರಿಗೆ ಮಣಿಪುರದಲ್ಲಿ ನೆಡೆದ ಘಟನೆ ಬಗ್ಗೆ ಯಾಕೆ ಆಸಕ್ತಿ ಇಲ್ಲ.? – ರಾಹುಲ್ ಗಾಂಧಿ

Leave a Reply Cancel reply

Your email address will not be published. Required fields are marked *

  • Home
  • About Us!
  • Contact Us !
  • Privacy Policy
  • Disclaimer
  • Terms and Conditions

Recent Posts

  • Ramya: ನಾವು ಎಲ್ಲಾ ಮುಸಲ್ಮಾನರನ್ನು ಕೆಟ್ಟವರು ಅಂತ ಹೇಳೋಕೆ ಆಗಲ್ಲ.! ನಟಿ ರಮ್ಯಾ !
  • Hema: ಫಿಕ್ಸ್ ಆಗಿದ್ದ ಮದುವೆ ಕ್ಯಾನ್ಸಲ್ ಆಯ್ತು.! ದುಡ್ಡು ತಗೊಂಡ ಫ್ರೆಂಡ್ ಕ್ಯಾರೆಕ್ಟರ್ ಬಗ್ಗೆ ಮಾತಡ್ದ.! ಆ್ಯಂಕರ್ ಹೇಮ ಜೀವನದಲ್ಲಿ ಬಂದ ಕಷ್ಟಗಳೆಷ್ಟು ಗೊತ್ತಾ.?
  • Dr Rajkumar: ಅಣ್ಣಾವ್ರು, ಅಂಬಿ, ಶಂಕ್ರಣ್ಣ, ವಿಷ್ಣುದಾದಾ ಒಟ್ಟಿಗೆ ನಟಿಸಬೇಕಿದ್ದ ಸಿನಿಮಾ ಯಾವುದು ಕಥೆ ಏನಾಯ್ತು ಗೊತ್ತಾ.?
  • Anupama Gowda: ಇನ್ನೂ ಮದುವೆಯಾಗದೇ ಇರುವುದಕ್ಕೆ ಕಾರಣ ಈ ಬಿಚ್ಚಿಟ ಅನುಪಮ ಗೌಡ.!
  • Prema: ಕೊನೆಗೂ ಡಿ’ವೋ’ರ್ಸ್ ಬಗ್ಗೆ ಮಾತನಾಡಿದ ನಟಿ ಪ್ರೇಮ.! ಅಷ್ಟಕ್ಕೂ ನಟಿ ಬಾಳಲ್ಲಿ ನಡೆದದ್ದೇನು ನೋಡಿ.!

Copyright © 2025 Namma Sandalwood.

Powered by PressBook WordPress theme