Skip to content

Namma Sandalwood

  • Home
  • Viral News
  • Useful Information
  • cinema news
  • Entertainment
  • News
  • Devotional
  • Serial News
  • Job News
  • Toggle search form

ಕಾವೇರಿ ವಿವಾದ, ಪ್ರಧಾನಿ ಮಧ್ಯಸ್ಥಿಕೆಗೆ ದೇವೇಗೌಡರ ಪತ್ರ, ಪತ್ರ ಸ್ವಾಗತಿಸಿದ ಸಿದ್ದರಾಮಯ್ಯ.!

Posted on September 27, 2023September 27, 2023 By Admin No Comments on ಕಾವೇರಿ ವಿವಾದ, ಪ್ರಧಾನಿ ಮಧ್ಯಸ್ಥಿಕೆಗೆ ದೇವೇಗೌಡರ ಪತ್ರ, ಪತ್ರ ಸ್ವಾಗತಿಸಿದ ಸಿದ್ದರಾಮಯ್ಯ.!

 

ರಾಜ್ಯದಲ್ಲಿ 123 ವರ್ಷಗಳಲ್ಲಿ ಅತಿ ಕಡಿಮೆ ಪ್ರಮಾಣದ ಮಳೆ ಉಂಟಾಗಿರುವುದರಿಂದ ಮುಂಗಾರು ಮಳೆಯ ಕೊರತೆಯಿಂದಾಗಿ ಬರದ ಪರಿಸ್ಥಿತಿ ಎದುರಾಗಿದೆ. ಜೊತೆಗೆ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣವೂ ಕೂಡ ಕುಸಿಯುತ್ತಿರುವುದರಿಂದ ರಾಜ್ಯದ ರೈತರಿಗೆ ಮತ್ತು ಕುಡಿಯುವ ನೀರಿಗಾಗಿ ಕಾವೇರಿಯನ್ನು ಅವಲಂಬಿಸಿರುವವರಿಗೆ ಮುಂದಿನ ತಿಂಗಳುಗಳಲ್ಲಿ ಸಮಸ್ಯೆ ಆಗಲಿದೆ ಎನ್ನುವುದನ್ನು ಅಂದಾಜಿಸಿ ತಕ್ಷಣವೇ ಸರ್ಕಾರವು ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು.

ರಾಜ್ಯದಲ್ಲಿ ಉಂಟಾಗಿರುವ ಕ್ಷಾಮದ ಪರಿಸ್ಥಿತಿಯನ್ನು ಪ್ರಾಧಿಕಾರಗಳಿಗೆ ಹಾಗೂ ಸರ್ವೋಚ್ಚ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬೇಕು ಎಂದು ರಾಜ್ಯದ ಜನತೆ ಹೋರಾಟ ಮಾಡಿ ಕೇಳುತ್ತಿದ್ದಾರೆ. ಈಗಾಗಲೇ ಮಂಡ್ಯ, ಬೆಂಗಳೂರು ಈ ಭಾಗಗಳಲ್ಲಿ ಚಳುವಳಿಗಳು ಕೂಡ ನಡೆಯುತ್ತಿದ್ದು ಕನ್ನಡಪರ ಸಂಘಟನೆಗಳು, ರೈತರು, ಸಿನಿಮಾ ತಾರೆಗಳು ಮತ್ತು ವಿಪಕ್ಷಗಳು ತಮ್ಮದೇ ಆದ ರೀತಿಯಲ್ಲಿ ಪ್ರತಿಭಟನೆಗೆ ಮಾಡುತ್ತಿವೆ.

ಖಾಲಿ ಹೊಟ್ಟೆಗೆ ಟೀ ಕಾಫಿ ಕುಡಿಯುವ ಅಭ್ಯಾಸ ಇದೆಯೇ? ಇದು ಎಷ್ಟು ಡೇಂಜರ್ ಯಾವೆಲ್ಲಾ ಕಾಯಿಲೆಗಳು ಬರುತ್ತವೆ ಗೊತ್ತಾ.?

ಈ ವಿಚಾರವಾಗಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ನರೇಂದ್ರ ಮೋದಿ ಅವರಿಗೆ ಪತ್ರ ಒಂದನ್ನು ಬರೆದಿದ್ದಾರೆ ಮತ್ತು ಆ ಪತ್ರವನ್ನು ತಮ್ಮ ಎಕ್ಸ್ ಜಾಲತಾಣದ ಖಾತೆಯಲ್ಲೂ ಕೂಡ ಹಂಚಿಕೊಂಡಿದ್ದಾರೆ. ಈ ವರ್ಷ ನಿರೀಕ್ಷಿತ ಪ್ರಮಾಣದಲ್ಲಿ ನೈರುತ್ಯ ಮುಂಗಾರು ರಾಜ್ಯಕ್ಕೆ ಅಪ್ಪಳಿಸಿಲ್ಲ ಹಾಗಾಗಿ ರಾಜ್ಯಕ್ಕೆ ಮಳೆಯ ಕೊರೆತೆಯೂ ಎದುರಾಗಿದೆ.

ಕೃಷಿ ಬಳಕೆ ಮಾತ್ರವಲ್ಲದೇ, ಕುಡಿಯುವ ನೀರಿಗೂ ಅಪಾಯ ಎದುರಾಗಿದೆ. ರಾಜ್ಯದಾದ್ಯಂತ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಆಗಸ್ಟ್‌ ಮತ್ತು ಸೆಪ್ಟೆಂಬರ್‌ನಲ್ಲಿ ಕರ್ನಾಟಕದಲ್ಲಿ ಸುರಿದ ಮಳೆ 123 ವರ್ಷಗಳ ಇತಿಹಾಸದಲ್ಲಿಯೇ ಅತ್ಯಂತ ಕಡಿಮೆ ಮಳೆ. ಇದರ ಜತೆಗೆ ಈಗಾಗಲೇ ತಮಿಳುನಾಡು ಕೇಳಿದಷ್ಟು ನೀರನ್ನು ಈ ವರೆಗೂ ಕರ್ನಾಟಕ ಹರಿಸುತ್ತಲೇ ಬಂದಿದೆ.

ರೈತನಿಗೆ ಗುಡ್ ನ್ಯೂಸ್, ಜಮೀನಿನ ಪಹಣಿ ಪತ್ರ ತಂದೆ ಅಥವಾ ತಾತನ ಹೆಸರಿನಲ್ಲಿ ಇದ್ದರೆ ಯಾವುದೇ ದಾಖಲೆ ಹೆಸರು ಬದಲಾಯಿಸಿಕೊಳ್ಳಬಹುದು.!

ಇಂದಿನ ತಿಂಗಳುಗಳಲ್ಲಿ ತಮಿಳುನಾಡಿನಲ್ಲಿ ಮಳೆಯಾಗುವ ಸಂಭವವಿದೆ ಆದರೆ ರಾಜ್ಯಕ್ಕೆ ಅವಕಾಶ ಕೂಡ ಇಲ್ಲ ಪ್ರಸ್ತುತ ರಾಜ್ಯದ ಪ್ರಮುಖ ಜಲಾಶಯಗಳಾದ ಕೃಷ್ಣ ರಾಜ ಸಾಗರ, ಕಬಿನಿ, ಹೇಮಾವತಿ, ಹಾರಂಗಿ ಜಲಾಶಯಗಳಲ್ಲಿ ಅಳತೆಯ ಪ್ರಕಾರ 104.55 TMC ನೀರು ಇರಬೇಕಿತ್ತು. ಆದರೆ, ಪ್ರಸ್ತುತ 51.10 TMC ನೀರು ಮಾತ್ರ ಇದೆ.
ಹಾಗಾಗಿ ಕರ್ನಾಟಕದ ಸ್ಥಿತಿಗತಿಯನ್ನೂ ಸಹಾ ಅರಿತುಕೊಂಡು, ಎರಡು ರಾಜ್ಯಗಳ ನಡುವೆ ಪ್ರಧಾನಮಂತ್ರಿಗಳಾದ ನೀವೇ ಮಧ್ಯಸ್ಥಿಕೆ ವಹಿಸಿ ಈ ಸಮಸ್ಯೆಗೆ ಪರಿಹಾರ ನೀಡಬೇಕು.

40 TMC ಗಿಂತ ಹೆಚ್ಚಿನ ಹೆಚ್ಚುವರಿ ಬಿಡುಗಡೆಗೆ ತಮಿಳುನಾಡು ಒತ್ತಾಯಿಸಿದೆ, ಇದು ಕೇವಲ ಅನ್ಯಾಯದ ಧೋರಣೆ ಮಾತ್ರವಲ್ಲ. ಸಮಾನತೆ ಮತ್ತು ನೈಸರ್ಗಿಕ ತತ್ವಗಳ ವಿರುದ್ಧವಾಗಿದೆ. ಸಂವಿಧಾನದ ಪ್ರಕಾರ ಕುಡಿಯುವ ನೀರು ಒದಗಿಸುವುದು ಮೂಲಭೂತ ಹಕ್ಕು. ಹಾಗಾಗಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಎಂದು ತಮ್ಮ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

JDS ಮತ್ತು BJP ಮೈತ್ರಿ ಬೆನ್ನಲ್ಲೇ JDS ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ ಸೈಯದ್ ಶಫೀವುಲ್ಲಾ.!

ಕಾವೇರಿ ನೀರು ಹಂಚಿಕೆ ವಿಚಾರವಾಗಿ ಮಾಜಿ ಪ್ರಧಾನಿ ದೇವೇಗೌಡ ಅವರು ಬರೆದ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ Xನಲ್ಲಿಯೇ ಪ್ರತಿಕ್ರಿಯಿಸಿದ್ದಾರೆ. ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನಾಡಿಗೆ ಎದುರಾಗಿರುವ ಸಂಕಷ್ಟ ನಿವಾರಿಸಲು ಪ್ರಧಾನಿ ಮೋದಿ ಅವರು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಮಾಜಿ ಪ್ರಧಾನಿ ದೇವೇಗೌಡ ಅವರು ಪತ್ರ ಬರೆದಿರುವುದನ್ನು ನಾನು ಸ್ವಾಗತಿಸುತ್ತೇನೆ ಎಂದು ಬರೆದಿದ್ದಾರೆ.

ನಾಡು, ನೆಲ, ಜಲ, ಭಾಷೆ ವಿಚಾರಕ್ಕೆ ಬಂದಾಗ ಪಕ್ಷ ಮರೆತು ಎಲ್ಲ ರಾಜಕೀಯ ಮುಖಂಡರುಗಳು ಒಂದಾಗಿರುವ ಉದಾಹರಣೆಯನ್ನು ಕರ್ನಾಟಕದಲ್ಲಿ ಕಂಡಿದ್ದೇನೆ. ಹಾಗಾಗಿ ದೇವೇಗೌಡರ ನಿಲುವಿನಿಂದ ಪ್ರೇರಣೆ ಪಡೆದು ರಾಜ್ಯದ BJP ನಾಯಕರು ಪ್ರಧಾನ ಮಂತ್ರಿಗಳು ಈ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಪರಿಹಾರ ತರುವಂತೆ ಒತ್ತಡ ತರಬೇಕು ಎಂದು ಹೇಳಿದ್ದಾರೆ. ಸದ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ತಡೆಯಲು ಪ್ರಧಾನಿಗಳು ಮಧ್ಯಸ್ಥಿಕೆಯಿಂದ ಮಾತ್ರ ಸಾಧ್ಯ ಎಂದವರು ತಿಳಿಸಿದ್ದಾರೆ.

ಕಾವೇರಿ ನೀರಿಗಾಗಿ ರಾಜ್ಯ ಸರ್ಕಾರ ವಕೀಲರಿಗಾಗಿ ಖರ್ಚು ಮಾಡಿದ್ದು 122 ಕೋಟಿ.! ಕರ್ನಾಟಕೇತರ ವಕೀಲರಿಂದ ರಾಜ್ಯಕ್ಕಾದ ಪ್ರಯೋಜನವೇನು.?

Viral News

Post navigation

Previous Post: ಖಾಲಿ ಹೊಟ್ಟೆಗೆ ಟೀ ಕಾಫಿ ಕುಡಿಯುವ ಅಭ್ಯಾಸ ಇದೆಯೇ? ಇದು ಎಷ್ಟು ಡೇಂಜರ್ ಯಾವೆಲ್ಲಾ ಕಾಯಿಲೆಗಳು ಬರುತ್ತವೆ ಗೊತ್ತಾ.?
Next Post: ಸುಪ್ರೀಂ ಕೋರ್ಟ್ ಆದೇಶ ಕೊಟ್ಟರು ಒಂದೇ ಒಂದು ಹನಿ ನೀರನ್ನು ತಮಿಳುನಾಡಿಗೆ ಬಿಡದ ಕರ್ನಾಟಕದ ಏಕೈಕ ನಾಯಕ ಯಾರು ಗೊತ್ತಾ.? ಎಲ್ಲರನ್ನು ಎದುರು ಹಾಕಿಕೊಂಡು ಇವರು ಗೆದ್ದಿದ್ದು ಹೇಗೆ ನೋಡಿ.!

Leave a Reply Cancel reply

Your email address will not be published. Required fields are marked *

  • Home
  • About Us!
  • Contact Us !
  • Privacy Policy
  • Disclaimer
  • Terms and Conditions

Recent Posts

  • Ramya: ನಾವು ಎಲ್ಲಾ ಮುಸಲ್ಮಾನರನ್ನು ಕೆಟ್ಟವರು ಅಂತ ಹೇಳೋಕೆ ಆಗಲ್ಲ.! ನಟಿ ರಮ್ಯಾ !
  • Hema: ಫಿಕ್ಸ್ ಆಗಿದ್ದ ಮದುವೆ ಕ್ಯಾನ್ಸಲ್ ಆಯ್ತು.! ದುಡ್ಡು ತಗೊಂಡ ಫ್ರೆಂಡ್ ಕ್ಯಾರೆಕ್ಟರ್ ಬಗ್ಗೆ ಮಾತಡ್ದ.! ಆ್ಯಂಕರ್ ಹೇಮ ಜೀವನದಲ್ಲಿ ಬಂದ ಕಷ್ಟಗಳೆಷ್ಟು ಗೊತ್ತಾ.?
  • Dr Rajkumar: ಅಣ್ಣಾವ್ರು, ಅಂಬಿ, ಶಂಕ್ರಣ್ಣ, ವಿಷ್ಣುದಾದಾ ಒಟ್ಟಿಗೆ ನಟಿಸಬೇಕಿದ್ದ ಸಿನಿಮಾ ಯಾವುದು ಕಥೆ ಏನಾಯ್ತು ಗೊತ್ತಾ.?
  • Anupama Gowda: ಇನ್ನೂ ಮದುವೆಯಾಗದೇ ಇರುವುದಕ್ಕೆ ಕಾರಣ ಈ ಬಿಚ್ಚಿಟ ಅನುಪಮ ಗೌಡ.!
  • Prema: ಕೊನೆಗೂ ಡಿ’ವೋ’ರ್ಸ್ ಬಗ್ಗೆ ಮಾತನಾಡಿದ ನಟಿ ಪ್ರೇಮ.! ಅಷ್ಟಕ್ಕೂ ನಟಿ ಬಾಳಲ್ಲಿ ನಡೆದದ್ದೇನು ನೋಡಿ.!

Copyright © 2025 Namma Sandalwood.

Powered by PressBook WordPress theme