Skip to content

Namma Sandalwood

  • Home
  • Viral News
  • Useful Information
  • cinema news
  • Entertainment
  • News
  • Devotional
  • Serial News
  • Job News
  • Toggle search form

BJP ಮತ್ತು JDS ಮೈತ್ರಿ ಬೆನ್ನೆಲ್ಲೇ ಬೆಂಗಳೂರಿನಲ್ಲಿ ಯಡಿಯೂರಪ್ಪ ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ.!

Posted on September 26, 2023 By Admin No Comments on BJP ಮತ್ತು JDS ಮೈತ್ರಿ ಬೆನ್ನೆಲ್ಲೇ ಬೆಂಗಳೂರಿನಲ್ಲಿ ಯಡಿಯೂರಪ್ಪ ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ.!

 

JDS ಹಾಗೂ BJP ಮೈತ್ರಿ (Alliance) ಬಗ್ಗೆ ಇದ್ದ ಎಲ್ಲಾ ಗುಮಾನಿಗಳಿಗೂ ಶುಕ್ರವಾರ ತೆರೆ ಬಿದ್ದಿದೆ. ಲೋಕಸಭೆಯಲ್ಲಿ JDS ಪಕ್ಷವು NDA ಜೊತೆಗೂಡುವುದು ಸ್ಪಷ್ಟವಾಗಿದೆ. ಇದರ JDS ಮತ್ತು NDA ಮೈತ್ರಿ ಬೆನ್ನಲ್ಲೇ JDS ಯುವ ಘಟಕದ ರಾಜ್ಯಾಧ್ಯಕ್ಷರಾಗಿರುವ, ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರರಾಗಿರುವ ನಿಖಿಲ್ ಕುಮಾರಸ್ವಾಮಿ (Nikhil Kumarswamy) ಅವರು ಮಾಜಿ ಸಿ. ಎಂ ಬಿ.ಎಸ್ ಯಡಿಯೂರಪ್ಪ (B.S Yediyurappa) ಅವರನ್ನು ಬೆಂಗಳೂರಿನಲ್ಲಿರುವ ಅವರ ಮನೆಗೆ ಹೋಗಿ ಭೇಟಿ ಮಾಡಿದ್ದಾರೆ.

ಯಡಿಯೂರಪ್ಪ ಅವರಿಗೆ ಶಾಲು ಹೊದಿಸಿ ಸನ್ಮಾನ ಮಾಡಿರುವ ನಿಖಿಲ್ ಕುಮಾರಸ್ವಾಮಿ ಅವರು ಶ್ರೀಕೃಷ್ಣನ ವಿಗ್ರಹವನ್ನು ಕಾಣಿಕೆಯಾಗಿ ನೀಡಿದ್ದಾರೆ. ಈ ಸಮಯದಲ್ಲಿ ಶಾಸಕ ಮುನಿರತ್ನ ಕೂಡ ನಿಖಿಲ್ ಕುಮಾರಸ್ವಾಮಿ ಅವರ ಜೊತೆಗಿದ್ದರು. ಈ ಭೇಟಿಯ ಫೋಟೋ ಹಾಗೂ ವಿಡಿಯೋಗಳು, ಭೇಟಿ ಬಳಿಕ ನಿಖಿಲ್ ಕುಮಾರಸ್ವಾಮಿ ಅವರು ಮಾಧ್ಯಮಗಳಿಗೆ ಉತ್ತರಿಸಿದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.

ನಿಮ್ಮ ಮನೆಯಲ್ಲೂ ಪ್ರತಿದಿನ ಪ್ಯಾಕೆಟ್ ಹಾಲು ತರುತ್ತಿದ್ದೀರಾ.? ಆಗಿದ್ರೆ ಈ ವಿಷಯ ತಿಳಿದುಕೊಂಡಿರಲೇಬೇಕು.!

ಯಡಿಯೂರಪ್ಪ ರವರ ಭೇಟಿಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರು NDA ಮೈತ್ರಿಕೂಟದ ಜೊತೆಗೆ ಕೈಜೋಡಿಸಿ ಮುಂಬರುವ ಲೋಕಸಭಾ ಚುನಾವಣೆಗೆ (Parliament Election) ರಾಜ್ಯದಲ್ಲಿ BJP ಹಾಗೂ JDS ಜೊತೆಯಾಗಿ ನಿಲ್ಲಲಿದೆ. ರಾಜ್ಯದ ಜನತೆಯ ಹಿತದೃಷ್ಟಿಯಿಂದ ದೇವೇಗೌಡರು (Devegowda) BJP ಜೊತೆ ಮೈತ್ರಿ ತೀರ್ಮಾನಕ್ಕೆ ಬಂದಿದ್ದಾರೆ.

ಪ್ರಾದೇಶಿಕ ಪಕ್ಷ ಉಳಿಸಬೇಕು ಎಂದು ದೇವೇಗೌಡರು ಹಾಗೂ ಕುಮಾರಸ್ವಾಮಿಯವರು ಶ್ರಮಿಸುತ್ತಿದ್ದಾರೆ. ಹಲವು ಕಾರ್ಯಕರ್ತರ ಶ್ರಮದಿಂದ ಕಟ್ಟಿರುವ ಪಕ್ಷ JDS, ನಮ್ಮಂತಹ ಯುವಕರು ಮುಂದಿನ ದಿನಗಳಲ್ಲಿ ಪಕ್ಷದ ಜವಾಬ್ದಾರಿ ತೆಗೆದುಕೊಳ್ಳಬೇಕಾಗುತ್ತದೆ. ಈ ಬಾರಿ ಎರಡೂ ಪಕ್ಷ ಜೊತೆ ಸೇರಿ 28 ಲೋಕಸಭಾ ಕ್ಷೇತ್ರದಲ್ಲೂ ನಾವೇ ಗೆಲ್ಲಬೇಕೆಂದು ನಮ್ಮ ಗುರಿ ಇದೆ.

BJP 25 ಸಂಸದರು ಕೂಡ ದಂಡಪಿಂಡಗಳು ಎಂದು ಆ.ಕ್ರೋ.ಶ ಹೊರ ಹಾಕಿದ ಕಾಂಗ್ರೆಸ್ ಘಟಕದ ಅಧ್ಯಕ್ಷ ಬಿ.ವಿ ಶ್ರೀನಿವಾಸ್.!

ಜನರನ್ನು ವಿಶ್ವಾಸಕ್ಕೆ ಪಡೆದು ಗೆಲ್ಲುತ್ತೇವೆ ಎಂದು ಹೇಳಿ, ಈ ನಿಟ್ಟಿನಲ್ಲಿ ಯುವಕನಾಗಿ, JDS ಪಕ್ಷದ ಕಾರ್ಯಕರ್ತನಾಗಿ ನಾನು ರಾಜ್ಯದಲ್ಲಿ BJP ಪಕ್ಷದ ವರಿಷ್ಠರಾಗಿರುವ ಯಡಿಯೂರಪ್ಪರವರ ಆಶೀರ್ವಾದ ಪಡೆದುಕೊಳ್ಳಬೇಕಾಗಿರುವುದು ನನ್ನ ಜವಾಬ್ದಾರಿ ಅದಕ್ಕಾಗಿ ಬಂದು ಆಶೀರ್ವಾದ ಪಡೆದುಕೊಂಡಿದ್ದೇನೆ.

ಈ ಹಿಂದೆಯೂ ಕೂಡ ರಾಜ್ಯದಲ್ಲಿ ನನ್ನ ತಂದೆ ಮತ್ತು ಕುಮಾರಸ್ವಾಮಿಯವರು ಅಧಿಕಾರದಲ್ಲಿದ್ದಾಗ BJP ಜೊತೆ ಮೈತ್ರಿ ಮಾಡಿಕೊಂಡಿದ್ದರು. ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಅವರ ಸರ್ಕಾರ ಜಂಟಿಯಾಗಿ ಅನೇಕ ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿತ್ತು ಎನ್ನುವುದನ್ನು ಸಹ ನೆನೆದಿದ್ದಾರೆ.

ಪೌರ ಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್.!

ಬಿ.ಎಸ್ ಯಡಿಯೂರಪ್ಪರವರು ಸಹ ಈ ಭೇಟಿ ಕುರಿತು ಮಾತನಾಡಿ ನಿಖಿಲ್ ಕುಮಾರಸ್ವಾಮಿ ಮತ್ತು ನಮ್ಮ ಭೇಟಿಯಲ್ಲಿ ಅಂತಹ ವಿಶೇಷತೆ ಏನು ಇರಲಿಲ್ಲ ಸೌಹಾರ್ದಯುತವಾಗಿ ಭೇಟಿ ಮಾಡಿ ಹೋಗಿದ್ದಾರೆ ಅಷ್ಟೇ, ಕುಮಾರಸ್ವಾಮಿ ಅವರು ಸಹ ಕರೆ ಮಾಡಿ ಮನೆಗೆ ಬಂದು ಹೋಗಿ ಎಂದು ಹೇಳಿದ್ದರು ನಾನು ಸಹ ಶೀಘ್ರದಲ್ಲಿ ಅವರ ಮನೆಗೆ ಹೋಗಿ ಅವರ ಆರೋಗ್ಯ ವಿಚಾರಿಸಿಕೊಂಡು ಬರುತ್ತೇನೆ.

#WATCH | On meeting with former CM BS Yediyurappa, Nikhil Kumaraswamy says, "As we all know JDS and BJP are now a part of the NDA alliance. On that basis, Mr Yediyurappa is one of the tallest leaders in Karnataka. So I just came here to take his blessings personally. We all know… https://t.co/JSg5Y7d1pi pic.twitter.com/TBQKLZauUu

— ANI (@ANI) September 24, 2023

ನಮ್ಮ ಜೊತೆ ಅವರು ಹೊಂದಾಣಿಕೆ ಆಗಿರುವುದರಿಂದ ನಾವೆಲ್ಲಾ ಈಗ ಒಟ್ಟಿಗೆ ಕೆಲಸ ಮಾಡಬೇಕಾಗಿದೆ ಎಂದು ಹೇಳಿದ್ದಾರೆ ಹಾಗೆ ಶಾಸಕ ಮುನಿರತ್ನ ಅವರು ಸಹ BJP, JDS ಮೈತ್ರಿ ಆಗಿರುವುದು ತುಂಬಾ ಒಳ್ಳೆಯ ಬೆಳವಣಿಗೆಯಾಗಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆಗೆ ಈ ಬೆಳವಣಿಗೆ ಆಗಿದ್ದರೆ ರಾಜ್ಯದಲ್ಲಿ 135 ಸ್ಥಾನಗಳಲ್ಲಿ ನಾವೇ ಗೆದ್ದು ಸರ್ಕಾರ ರಚಿಸುತ್ತಿದೆವು. ಆದರೆ ಈಗ ಅದಕ್ಕೆ ಸಮಯ ಬಂದಿದೆ ಈ ಬಾರಿ 28 ಕ್ಷೇತ್ರ ಗೆಲ್ಲುವ ದೃಷ್ಟಿಯಿಂದ ನಮ್ಮ ಪಕ್ಷದ ವರಿಷ್ಠರು ದೇವೇಗೌಡರು ಮತ್ತು ಕುಮಾರಸ್ವಾಮಿ ಅವರ ಜೊತೆ ಚರ್ಚೆ ಮಾಡಿ ಒಂದಾಗುವ ನಿರ್ಧಾರ ಮಾಡಿದ್ದಾರೆ ಎಂದು ಹೇಳಿಕೆ ಕೊಟ್ಟಿದ್ದಾರೆ.

ಮಾಕಳಿ ಬೇರು ಇದ್ರೆ ಸಾಕು ನಿಮ್ಮ ಎಲ್ಲ ಕೆಲಸಗಳು 100% ಸಕ್ಸಸ್ ಆಗುತ್ತೆ.!

Viral News

Post navigation

Previous Post: ನಿಮ್ಮ ಮನೆಯಲ್ಲೂ ಪ್ರತಿದಿನ ಪ್ಯಾಕೆಟ್ ಹಾಲು ತರುತ್ತಿದ್ದೀರಾ.? ಆಗಿದ್ರೆ ಈ ವಿಷಯ ತಿಳಿದುಕೊಂಡಿರಲೇಬೇಕು.!
Next Post: ಒಂದೇ ಆವಾರ್ಡ್ ಫಂಕ್ಷನ್ ನಲ್ಲಿ ಬರೋಬ್ಬರಿ 10 SIIMA ಅವಾರ್ಡ್ ಪಡೆದುಕೊಂಡ ಕಾಂತರಾ ಸಿನಿಮಾ.!

Leave a Reply Cancel reply

Your email address will not be published. Required fields are marked *

  • Home
  • About Us!
  • Contact Us !
  • Privacy Policy
  • Disclaimer
  • Terms and Conditions

Recent Posts

  • Ramya: ನಾವು ಎಲ್ಲಾ ಮುಸಲ್ಮಾನರನ್ನು ಕೆಟ್ಟವರು ಅಂತ ಹೇಳೋಕೆ ಆಗಲ್ಲ.! ನಟಿ ರಮ್ಯಾ !
  • Hema: ಫಿಕ್ಸ್ ಆಗಿದ್ದ ಮದುವೆ ಕ್ಯಾನ್ಸಲ್ ಆಯ್ತು.! ದುಡ್ಡು ತಗೊಂಡ ಫ್ರೆಂಡ್ ಕ್ಯಾರೆಕ್ಟರ್ ಬಗ್ಗೆ ಮಾತಡ್ದ.! ಆ್ಯಂಕರ್ ಹೇಮ ಜೀವನದಲ್ಲಿ ಬಂದ ಕಷ್ಟಗಳೆಷ್ಟು ಗೊತ್ತಾ.?
  • Dr Rajkumar: ಅಣ್ಣಾವ್ರು, ಅಂಬಿ, ಶಂಕ್ರಣ್ಣ, ವಿಷ್ಣುದಾದಾ ಒಟ್ಟಿಗೆ ನಟಿಸಬೇಕಿದ್ದ ಸಿನಿಮಾ ಯಾವುದು ಕಥೆ ಏನಾಯ್ತು ಗೊತ್ತಾ.?
  • Anupama Gowda: ಇನ್ನೂ ಮದುವೆಯಾಗದೇ ಇರುವುದಕ್ಕೆ ಕಾರಣ ಈ ಬಿಚ್ಚಿಟ ಅನುಪಮ ಗೌಡ.!
  • Prema: ಕೊನೆಗೂ ಡಿ’ವೋ’ರ್ಸ್ ಬಗ್ಗೆ ಮಾತನಾಡಿದ ನಟಿ ಪ್ರೇಮ.! ಅಷ್ಟಕ್ಕೂ ನಟಿ ಬಾಳಲ್ಲಿ ನಡೆದದ್ದೇನು ನೋಡಿ.!

Copyright © 2025 Namma Sandalwood.

Powered by PressBook WordPress theme